68 ಸಾಧಕರು, 10  ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಹೊರಬಿದ್ದಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಗಂಡಗಿ ಪ್ರಶಸ್ತಿ ವಿಜೇತರ ಹೆಸರನ್ನು ಬಿಡುಗಡೆ ಮಾಡಿದ್ದಾರೆ.

ವಿವಿಧ ಕ್ಷೇತ್ರಗಳ ಸಾಧಕರು, ವಿವಿಧ ಸಂಘಟನೆಗಳನ್ನು ಗುರುತಿಸಿ ಈ ಬಾರಿ ಪ್ರಶಸ್ತಿಗೆ ಪರಿಗಣಿಸಗಲಾಗಿದೆ.

ಇಸ್ರೋ ಸಂಸ್ಥೆ ಚೇರ್ಮನ್ ಎಸ್ ಸೋಮನಾಥ್ ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ.

ಕೊಪ್ಪಳ ಜಿಲ್ಲೆಯಲ್ಲಿ ಶಾಲೆಗೆ 2 ಎಕರೆ ಜಾಗ ನೀಡಿದ್ದ ಹುಚ್ಚಮ್ಮಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ.

ಸಿನಿಮಾ ಕ್ಷೇತ್ರದಿಂದ ಹಿರಿಯ ನಟರಾದ ಡಿಂಗ್ರಿ ನಾಗರಾಜ್ ಗೆ ರಾಜ್ಯೋತ್ಸವ ಪ್ರಶಸ್ತಿ

ಸಿನಿಮಾ ರಂಗದಿಂದ ಬ್ಯಾಂಕ್ ಜನಾರ್ಧನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಬಾರಿ 12 ಮಹಿಳೆಯರು, ಒಬ್ಬರು ಮಂಗಳಮುಖಿಗೆ ಪ್ರಶಸ್ತಿ ನೀಡಲಾಗುತ್ತದೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ 5 ಲಕ್ಷ ನಗದು.