ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಹುಲಿವೇಷ ತಂಡಗಳಲ್ಲಿ ಒಂದಾದ ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ಹೆಸರು ನೀವು ಕೇಳಿರುತ್ತಿರಿ

ಈ ತಂಡದ ಪ್ರಮುಖ ನಾಯಕನನ್ನು ದುಷ್ಕರ್ಮಿಗಳು ತಲವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ  ಆತಂಕಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ

ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರಿಗೆ 26 ವರ್ಷ

ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಡಿದು ಹತ್ಯೆ ಮಾಡಲಾಗಿದ್ದು,

Crime News: ಬಾಲಕನ ಮೃತದೇಹದ ಮೇಲಿತ್ತು S ಮತ್ತು R ಅಕ್ಷರ!

ಅಕ್ಷಯ್ ಕಲ್ಲೇಗ ಪುತ್ತೂರಿನಲ್ಲಿ ಇದ್ದಾಗ ಆಗಮಿಸಿದ ತಂಡಯೊಂದು ಯದ್ವಾತದ್ವ ತಲವಾರ್‌ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ

ಪುತ್ತೂರಿನ ಕಲ್ಲೇಗ ಟೈಲರ್ ಮುಖ್ಯಸ್ಥ ಅಕ್ಷಯ್ ಕಲ್ಲೇಗನನ್ನು ಮಚ್ಚಿನಿಂದ ಕಡಿದು ಹತ್ಯೆ ಮಾಡಿದ ಬೆನ್ನಲ್ಲೇ ಆರೋಪಿಗಳಾದ ಬನ್ನೂರು ನಿವಾಸಿ ಮನೀಷ್ ಮತ್ತು ಚೇತು ಪೊಲೀಸ್ ಠಾಣೆಗೆ ಶರಣಾಗಿದ್ದು,

ಮತ್ತೋರ್ವ ಆರೋಪಿ ತಲೆಮಲೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ

ಕೊಲೆಗೆ ಕಾರಣವೇನು? ಮೂಲಗಳ ಪ್ರಕಾರ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ವಿಚಾರದಲ್ಲಿ ಗಲಾಟೆ ಆರಂಭವಾಗಿದ್ದು, 

ಪ್ರತಿಮಾ ಕೊಲೆ ಕೇಸ್; ನಾಪತ್ತೆಯಾಗಿದ್ದ ಕಾರ್ ಚಾಲಕ ಪೊಲೀಸರ ವಶಕ್ಕೆ!

ಈ  ಎರಡು ಸಾವಿರ ರೂಪಾಯಿ ನೀಡುವ ವಿಚಾರದಲ್ಲಿ ಮಾತುಕತೆ ವಿಕೋಪಕ್ಕೆ ಹೋಗಿದೆ

ಮಾತುಕತೆ ವಿಕೋಪಕ್ಕೆ ಹೋಗುತ್ತಿದ್ದಂತೆ ಖಾಸಗಿ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗನಿಗೆ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ಉಂಟಾಗಿದ್ದು, 

ಕೊನೆಗೆ ಅಕ್ಷಯ್ ಕಲ್ಲೇಗನನ್ನು ಮೂರಕ್ಕೂ ಅಧಿಕ ಮಂದಿಯ ತಂಡ ಅಟ್ಟಾಡಿಸಿ ಹೋಗಿ ತಲವಾರಿನಿಂದ ದಾಳಿ ನಡೆಸಿದೆ

ಇನ್ನು, ಅಕ್ಷಯ್ ಕಲ್ಲೇಗನ ಹತ್ಯೆಗೆ ಬೇರೆ ಕಾರಣಗಳು ಇದೆಯಾ ಎಂಬ ಬಗ್ಗೆಯೂ ಪೊಲೀಸರ ತನಿಖೆ ನಡೆಸುತ್ತಿದ್ದಾರೆ

ಅವನಿಗಾಗಿ 'ಆಂಟಿ ಪ್ರೀತ್ಸೆ' ಎಂದ ಪ್ರಿಯಕರನನ್ನೇ ಕೊಲೆಗೈದಳು, ಕೊಲೆ ಕೇಸ್​ಗೆ ಸ್ಪೋಟಕ ಟ್ವಿಸ್ಟ್