ಡಿ.ಕೆ ಶಿವಕುಮಾರ್ ಮನೆದೇವತೆ ಕೆಂಕೇರಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿದೆ.
ಕನಕಪುರ ಪಟ್ಟಣದಲ್ಲಿರುವ ಕೆಂಕೇರಮ್ಮ ದೇವಾಲಯದಲ್ಲಿ ನಡೆದ ಕಳ್ಳತನ
ಅರ್ಚಕರು ಊಟಕ್ಕೆ ಹೋಗಿದ್ದಾಗ, ಕಳ್ಳತನ ಮಾಡಿರೋ ಖದೀಮ
8 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ ಕದ್ದೋಯ್ದ ಖದೀಮ
ದೇವಿಯ ತಾಳಿ ಹಾಗೂ ಕಿವಿಯ ಆಭರಣ ಕಳ್ಳತನ
ಕಳ್ಳತನ ಮಾಡಿದ ವೀಡಿಯೋ ದೇವಾಲಯದ ಸಿಸಿಟಿವಿಯಲ್ಲಿ ಸೆರೆ
ಪ್ರತಿವರ್ಷವೂ ಈ ದೇವಾಲಯದಲ್ಲಿ ಅದ್ಧೂರಿ ಕೊಂಡೋತ್ಸವ ಜರುಗಲಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.
ಈ ಸಂಬಂಧ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಡಿ.ಕೆ ಶಿವಕುಮಾರ್ ಚುನಾವಣಾ ಸಂದರ್ಭದಲ್ಲಿ ಕುಟುಂಬ ಸಮೇತ ಆಗಮಿಸಿ ಕೆಂಕೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಾರೆ.
ಕಳ್ಳತನ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.