ರಿಷಬ್ ಶೆಟ್ಟಿ ಇಂದು ಉಡುಪಿಯಲ್ಲಿ ಪಾಣರ ನಲಿಕೆ ಸಮುದಾಯದ ಸಮಾವೇಶದಲ್ಲಿ ಭಾಗಿಯಾಗಿದ್ದರು. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಾರ್ಯಕ್ರಮ ನಡೆದಿದೆ
ಪ್ರಥಮ ಬಾರಿಗೆ ನಡೆಯುತ್ತಿರುವ ಸಮ್ಮೇಳನದಲ್ಲಿ ರಿಷಬ್ ಶೆಟ್ಟಿ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಪಾಣಾರ ನಲಿಕೆ ಸಮುದಾಯದ ಹಿರಿಯ ನರ್ತಕರಿಗೆ ಸನ್ಮಾನ ಮಾಡಲಾಯ್ತು
ನಲಿಕೆ ಸಮುದಾಯದ ಓದುವ ಮಕ್ಕಳಿಗೆ ಟ್ರಸ್ಟ್ ನಿಂದ ಸಹಾಯ ಮಾಡುತ್ತೇವೆ. ಪಾಣರ ಸಮುದಾಯದ ಮಕ್ಕಳಲ್ಲಿ ಶಿಕ್ಷಣ ಜೊತೆ ಆಚಾರ ವಿಚಾರ ಮುಂದುವರೆಸಲಿ. ಸಮುದಾಯಕ್ಕೆ ಭವನಕ್ಕೆ ಶಕ್ತಿಮೀರಿ ಸರಕಾರಕ್ಕೆ ಮನವರಿಕೆ ಮಾಡುತ್ತೇನೆ ಎಂದಿದ್ದಾರೆ