ರಾಜಕೀಯ ಸೇರಿದಂತೆ ಸಮಾಜದಲ್ಲಿ ಆಗುವ ಬೆಳವಣಿಗೆಗಳ ಕುರಿತು ಪ್ರತೀ ಬಾರಿಯೂ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ಏನಾದರೊಂದು ಹೇಳಿಕೆ ನೀಡುತ್ತಲೇ ಇರುತ್ತಾರೆ

ಅದು ಸಾಕಷ್ಟು ಸುದ್ದಿ ಕೂಡ ಮಾಡುತ್ತೆ. ಇದೀಗ ಕೋಡಿಮಠದ ಶ್ರೀಗಳು ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ

ಇತ್ತೀಚಿನ ಕೆಲ ದಿನದಿಂದ ಮುಂಬರುವ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಾಗಿ ಹೋರಾಟ ನಡೆಸುತ್ತೆ ಅನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಕಾಂಗ್ರೆಸ್‌ನವರು ಇದರಿಂದ ಏನೂ ಎಫೆಕ್ಟ್ ಆಗಲ್ಲ ಅಂತಿದ್ದಾರೆ

ಆದರೆ ಜೆಡಿಎಸ್‌ 6 ಸೀಟ್‌ಗಳನ್ನು ಕೇಳುವ ಮೂಲಕ ತನ್ನದೇ ಆದ ಅಸ್ತಿತ್ವವನ್ನು ವೃದ್ಧಿಸಲು ಪ್ರಯತ್ನಿಸುತ್ತಿದೆ. ಒಟ್ಟಾರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡೋದು ಖಚಿತ ಎಂದು ಹೇಳಲಾಗ್ತಿದೆ

ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ್ದಾರೆ

ಈ ಬಗ್ಗೆ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ, ಅದು ಅವರವರ ವಿಚಾರ. ಅದರ ಬಗ್ಗೆ ಹೇಳಲು ಆಗುವುದಿಲ್ಲ. ದೇಶದ ಬಗ್ಗೆ ಈ ಹಿಂದೆಯೂ ಹೇಳಿದ್ದೆ. ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಕಾದಿದೆ ಎಂದು ಹೇಳಿದರು

ಮುಂದಿನ ದಿನಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಕಾಡಲಿದೆ ಎಂದು ಭವಿಷ್ಯ ನುಡಿದಿರುವ ಕೋಡಿಶ್ರೀ, ರಾಷ್ಟ್ರ ರಾಜಕಾರಣ‌, ರಾಜ್ಯ ರಾಜಕಾರಣದಲ್ಲೂ ಅಸ್ಥಿರತೆ ಉಂಟಾಗಲಿದೆ. ಯುಗಾದಿ ನಂತರ ಏನಾಗುತ್ತೋ‌ ಕಾದು‌ನೋಡಿ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ

ಇನ್ನು ಸುದ್ದಿಗಾರರು ರಾಜ್ಯ ಸರ್ಕಾರದ ಉಚಿತ ಭಾಗ್ಯಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೋಡಿ ಮಠದ ಶ್ರೀ, ಸರ್ಕಾರದ ಉಚಿತ ಭಾಗ್ಯಗಳು ಒಳ್ಳೆಯದೇ ಎಂದು ಹೇಳುವ ಮೂಲಕ ಉಚಿತ ಭಾಗ್ಯಗಳಿಂದ ರಾಜ್ಯ ಆರ್ಥಿಕ ದಿವಾಳಿತನಕ್ಕೆ ಹೋಗುತ್ತೆ ಅನ್ನೋ ಆರೋಪ‌ಕ್ಕೆ ಪ್ರತಿಕ್ರಿಯೆ ನೀಡಿದರು

ರಾಜ್ಯ ಸರ್ಕಾರದ ಉಚಿತ ಭಾಗ್ಯಗಳಿಂದ ರಾಜ್ಯದಲ್ಲಿ ಆರ್ಥಿಕ ದಿವಾಳಿತನ ಆಗೋದಿಲ್ಲ. ರಾಜ್ಯ ಸಂಪಬ್ಧರಿತವಾಗಿರುತ್ತೆ. ಉಚಿತ ಭಾಗ್ಯಗಳಿಂದ ಜನಸಾಮಾನ್ಯರಿಗೆ ಸಾಕಷ್ಟು ಅನುಕೂಲಗಳಾಗಿವೆ

ಕೇಂದ್ರವು ಆರ್ಥಿಕವಾಗಿ ಸದೃಢವಾಗಿದೆ. ರಾಜ್ಯ ಮತ್ತು ಕೇಂದ್ರ ಆರ್ಥಿಕ ದಿವಾಳಿಯಾಗೋ ಪ್ರಶ್ನೆ ಬರಲ್ಲ ಎಂದು ಕೋಡಿಮಠ ಶ್ರೀಗಳು ಹೇಳಿದರು