ಡಾಂಬರಿನಲ್ಲಿ ಸಿಲುಕಿದ ನಾಗರಹಾವೊಂದನ್ನು ಪುತ್ತೂರಿನ ಉರಗ ಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆಮಾಡಿದ್ದಾರೆt

ಡಾಂಬರ್‌ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹಾವನ್ನು ಎರಡು ದಿನಗಳ ಕಠಿಣ ಪರಿಶ್ರಮದೊಂದಿಗೆ ತೇಜಸ್ ರಕ್ಷಿಸಿದ್ದಾರೆ

ಉರಿ ಬಿಸಿಲಿನಲ್ಲಿ ಡಾಂಬರ್ ರಸ್ತೆಯಲ್ಲಿ ಸಿಲುಕಿ ಹಾವು ಹಾಗೂ ಇತರ ಸಣ್ಣ ಪ್ರಾಣಿಗಳು ಒದ್ದಾಡೋದು ಸಾಮಾನ್ಯವಾಗಿದ್ದು, ಇಂಥ ಸಮಯದಲ್ಲಿ ಅವುಗಳನ್ನು ರಕ್ಷಿಸಲು ಹೋಗುವವರ ಸಂಖ್ಯೆ ಕಡಿಮೆಯೇ

ಅದರಲ್ಲೂ ವಿಷಜಂತುಗಳು ಸಿಲುಕಿಕೊಂಡಿದ್ದರೆ, ಅದರ ಬಳಿಗೂ ಹೋಗದೆ ಹಾವುಗಳನ್ನು ಅಲ್ಲೇ ಬಿಟ್ಟು ಹೋಗುವವರೇ ಹೆಚ್ಚು

ಆದರೆ ತೇಜಸ್ ಬನ್ನೂರು ಇಂಥಹ ಹಲವು ಕಾರ್ಯಗಳನ್ನು ಮಾಡಿದ್ದು, ಅದರಲ್ಲೂ ಹಾವುಗಳನ್ನು ರಕ್ಷಿಸಿ ಅವುಗಳಿಗೆ ಜೀವದಾನವನ್ನು ಮಾಡಿರುವ ಹಲವು ಉದಾಹರಣೆಗಳಿವೆ

ಅದೇ ರೀತಿಯ ಒಂದು ಕಾರ್ಯಾಚರಣೆಯನ್ನು ತೇಜಸ್ ಬನ್ನೂರು ಪುತ್ತೂರಿನ ನೆಹರೂ ನಗರದಲ್ಲಿ ಮಾಡಿದ್ದಾರೆ

ನಗರದ ಮನೆಯೊಂದರಲ್ಲಿ ಡಾಂಬರ್ ಡಬ್ಬಿಗಳನ್ನು ಶೇಖರಿಸಿಟ್ಟ ಪ್ರದೇಶದಲ್ಲಿ ನಾಗರಹಾವು ಪತ್ತೆಯಾಗಿತ್ತು

ಹಾವೊಂದು ಡಾಂಬರ್ ಡಬ್ಬಿಗಳ ಅಂಚಿನಲ್ಲಿ ಹೋಗಿರುವುದನ್ನು ಗಮನಿಸಿದ್ದ ಮನೆ ಮಂದಿ ತೇಜಸ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ

ಕರಾವಳಿಯಲ್ಲಿ ನಡೆದ ಗೋವರ್ಧನ ಪೂಜೆ, ಈ ಆಚರಣೆಯ ಮಹತ್ವ ಇಲ್ಲಿದೆ

ನಾಗರಹಾವಿನ ಚರ್ಮದಿಂದ ಡಾಂಬರ್ ತೆಗೆಯಲು ಎರಡು ದಿನಗಳ ಕಾಲ ಶ್ರಮಪಟ್ಟಿದ್ದಾರೆ

ನಾಗರಹಾವನ್ನು ಶುದ್ಧ ಕೊಬ್ಬರಿ ಎಣ್ಣೆಯಲ್ಲಿ ಒಂದು ದಿನ ಸಂಪೂರ್ಣ ಅದ್ದಿ ಇಟ್ಟು ಬಳಿಕ ಅದರ ಮೇಲಿಂದ ಡಾಂಬರ್ ಅನ್ನು ಬೇರ್ಪಡಿಸಿದ್ದಾರೆ

ಸುಮಾರು ಒಂದು ವರ್ಷ ಪ್ರಾಯದ ನಾಗರಹಾವು ಚೇತರಿಸಿಕೊಂಡ ಬಳಿಕ ಅದನ್ನು ಸುರಕ್ಷಿತವಾಗಿ ಕಾಡಿಗೆ ಬಿಡುವ ಕಾರ್ಯವನ್ನೂ ತೇಜಸ್ ಮಾಡಿದ್ದಾರೆ

ಇದರಿಂದಾಗಿ ಈಗಿರುವ ಚರ್ಮ ಕಳಚಿ ಹೋಗಲಿದೆ. ಇದರಿಂದಾಗಿ ಹಾವಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ ಎಂದು ತೇಜಸ್ ತಿಳಿಸಿದರು

ಪತ್ನಿ ಸ್ಪಂದನಾ ನೆನೆದು ವಿಜಯ್ ರಾಘವೇಂದ್ರ ಮತ್ತೆ ಭಾವುಕ!