ಪಂಚೆ ಹಾಕಿ ಮಾಲ್‌ಗೆ ಬಂದಿದ್ದಕ್ಕೆ ಅನ್ನದಾತನಿಗೆ ಅವಮಾನ!

ಪಂಚೆ ಹಾಕಿ ಮಾಲ್‌ಗೆ ಬಂದಿದ್ದಕ್ಕೆ ಅನ್ನದಾತನಿಗೆ ನೋ ಎಂಟ್ರಿ

ಬೆಂಗಳೂರಿನ ಪ್ರತಿಷ್ಠಿತ ಜಿಟಿ ಮಾಲ್‌ನಲ್ಲಿ ರೈತನಿಗೆ ಅವಮಾನ ಮಾಡಲಾಗಿದೆ

ಮಾಲ್‌ನಲ್ಲಿ ಸಿನಿಮಾ ನೋಡಲು ಅಪ್ಪ-ಮಗ ಇಬ್ಬರು ಬಂದಿದ್ದರು.

ಪಂಚೆ ಹಾಕಿರೋ ಕಾರಣ ರೈತನಿಗೆ ಒಳಗಡೆ ಹೋಗೋದಕ್ಕೆ ಅವಕಾಶ ನೀಡಿಲ್ಲ.

ನೀವು ಪ್ಯಾಂಟ್ ಹಾಕಿದ್ದೀರಿ ಒಳಗಡೆ ಹೋಗಬಹುದು ಅಂತ ಮಗನಿಗೆ ಹೇಳಿದ್ದಾರೆ.

ರೈತನಿಗೆ ಕೆಲ‌ದಿನಗಳ ಹಿಂದೆ ಮೆಟ್ರೋದಲ್ಲಿ ಪ್ರವೇಶ ನಿರ್ಬಂಧ ಮಾಡಿದ್ದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಇದೀಗ ಮಾಲ್ ನಲ್ಲಿ ಪ್ರವೇಶ ನಿರಾಕರಿಸಿದಕ್ಕೆ ಬಾರಿ ವಿರೋಧ ವ್ಯಕ್ತವಾಗುತ್ತಿದೆ.

ರೈತ ಬೆಳೆಯುವ ಬೆಳೆ ಬೇಕು. ರೈತನಿಗೆ ಮರ್ಯಾದೆ ಕೊಡೋಕೆ ಬರಲ್ವಾ ಅಂತ ಪ್ರಶ್ನಿಸುತ್ತಿದ್ದಾರೆ.

ಜಿ.ಟಿ ಮಾಲ್‌ನ ನಡೆಗೆ ರಾಜ್ಯದೆಲ್ಲೆಡೆಯಿಂದ ಭಾರೀ ಖಂಡನೆ ವ್ಯಕ್ತವಾಗಿತ್ತು.