ಮಾಜಿ ಸಿಎಂ  ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಐಸಿಯು ಘಟಕದಿಂದ ಸಾಮಾನ್ಯ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ

ತೀವ್ರ ಜ್ವರದಿಂದ ಬಳಲುತ್ತಿದ್ದ ಕುಮಾರಸ್ವಾಮಿ ಅವರು ಬುಧವಾರ ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು

ತೀವ್ರ ಜ್ವರದ ಹಿನ್ನೆಲೆ ಕುಮಾರಸ್ವಾಮಿ ಅವರನ್ನು ಐಸಿಯೂ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ

ಕುಮಾರಸ್ವಾಮಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಕೆ ಕಂಡು ಬಂದ ಹಿನ್ನೆಲೆ ಸ್ಪೆಷಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದ್ದ, ಚಿಕಿತ್ಸೆ ಮುಂದುವರಿಸಲಾಗಿದೆ

ಡಾಕ್ಟರ್ ಪಿ. ಸತೀಶ್ ಚಂದ್ರ ನೇತೃತ್ವದಲ್ಲಿ ಟ್ರೀಟ್ಮೆಂಟ್ ನೀಡಲಾಗ್ತಿದೆ. ಸದ್ಯ ಕುಮಾರಸ್ವಾಮಿ ಚೇತರಿಸಿಕೊಂಡಿದ್ದಾರೆ ಅಂತ ಕುಟುಂಬಸ್ಥರು, ವೈದ್ಯರು ಮಾಹಿತಿ ಕೊಟ್ಟಿದ್ದಾರೆ

ಆಸ್ಪತ್ರೆಗೆ ಭೇಟಿ ನೀಡಿದ್ದ ಅನಿತಾ ಕುಮಾರಸ್ವಾಮಿ, ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಕುಮಾರಸ್ವಾಮಿಯವರು ಆರಾಮಾಗಿದ್ದಾರೆ

ಊಹಾಪೋಹದ ಸುದ್ದಿಗಳನ್ನ ಹರಡಬೇಡಿ. ರಾಜ್ಯದ ಜನತೆ ಗಾಬರಿಯಾಗೋದು ಬೇಡ. ಯಾರೂ ಸಹ ಆತಂಕಪಡೋದು ಬೇಡ. ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗ್ತಾರೆ ಎಂದಿದ್ದಾರೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ  ಅಪೋಲೋ ಆಸ್ಪತ್ರೆ ವೈದ್ಯರಿಗೆ ಕರೆ ಮಾಡಿ ಕುಮಾರಸ್ವಾಮಿ  ಆರೋಗ್ಯದ ಮಾಹಿತಿ ವಿಚಾರಿಸಿದ್ರು. ಇತ್ತ ಸಿಎಂ ಸಿದ್ದರಾಮಯ್ಯ ಅವರು ಹೆಚ್ ಡಿಕೆ ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಕುಮಾರಸ್ವಾಮಿ ಆರೋಗ್ಯದ ಮಾಹಿತಿ ಪಡೆದಿದ್ದಾರೆ

ಕುಮಾರಸ್ವಾಮಿ  ಆದಷ್ಟು ಬೇಗ ಗುಣಮುಖರಾಗಲಿ ಎಂದು ಆಶಿಸಿದ್ದಾರೆ