57 ವರ್ಷಕ್ಕೆ ಇಹಲೋಕ ತ್ಯಜಿಸಿದ ಖ್ಯಾತ ನಿರೂಪಕಿ ಅಪರ್ಣಾ!

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕ್ಯಾನ್ಸರ್ ಕಾರಣದಿಂದ ಇಹಲೋಕ ತ್ಯಜಿಸಿದ್ದಾರೆ.

ಕನ್ನಡ ಭಾಷೆಯನ್ನ ಅದ್ಭುತವಾಗಿ ಮಾತನಾಡುತ್ತಿದ್ದ ಅಪರ್ಣ

ತಮ್ಮ ನಿರೂಪಣಾ ಶೈಲಿಯಿಂದಲೇ ಅಪಾರ ಅಭಿಮಾನಿ ಬಳಗವನ್ನ ಹೊಂದಿದ್ದರು.

ಹಲವು ದಶಕಗಳ ಕಾಲ ಸಾವಿರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನ ನಿರೂಪಿಸಿದ್ದರು.

1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು.

1998 ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

2013 ರಲ್ಲಿ ಆರಂಭವಾದ ಕಿರುತೆರೆ ಶೋ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು.

ಅಪರ್ಣಾ ಅವರಿಗೆ ನಿರೂಪಣೆ ಶಾಲೆ ತೆಗೆಯಬೇಕೆಂದ ಆಸೆ ಇತ್ತು ಎಂದು ತಿಳಿದುಬಂದಿದೆ.

2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ` ಪ್ರಯಾಣಿಕರ ಸೂಚನೆಗೂ ಅಪರ್ಣ ಧ್ವನಿ ನೀಡಿದ್ದರು.

ಪ್ರಧಾನ ಮಂತ್ರಿ, ಮುಖ್ಯಮಂತ್ರಿಗಳು ಹಾಗೂ ಕನ್ನಡದ ಪ್ರಖ್ಯಾತ ಕಾರ್ಯಕ್ರಮಗಳಿಗೆ ಅಪರ್ಣಾ ನಿರೂಪಣೆ ಮಾಡಿದ್ದರು.