2 ವರ್ಷದ ಕಲಹ ಕೊನೆ, ಕ್ಷಮೆ ಕೇಳಿದ ಚಾಲೆಂಜಿಂಗ್ ಸ್ಟಾರ್!

ಮೀಡಿಯಾ-ದರ್ಶನ್ ನಡುವಿನ ವಾರ್ ಸ್ಯಾಂಡಲ್ ವುಡ್ ನಲ್ಲಿ ದೊಡ್ಡಸುದ್ದಿಯಾಗಿತ್ತು

ವರಮಹಾಲಕ್ಷ್ಮಿ ಹಬ್ಬದ ದಿನ ಕೊನೆಗೂ ಯಜಮಾನ ಮಾಧ್ಯಮದ ಜೊತೆಗಿನ ಮುನಿಸನ್ನು ಕೊನೆಗೊಳಿಸಿದ್ದಾರೆ.

ದರ್ಶನ್ ಈ ಬಗ್ಗೆ ಕ್ಷಮೆ ಕೇಳಿದ್ದು ಮಾಧ್ಯಮದ ಮಂದಿಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಕೆಲ ವರ್ಷಗಳ ಹಿಂದಿನ ನನ್ನಾಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು.

ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ.

ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ರಂಗದ ಕ್ಷಮೆ ಇರಲಿ.

ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮದ ಅಗತ್ಯವಿದೆ.

ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮದ ಪ್ರೀತಿಯಿಂದ ನೀಡಿದ ಪ್ರಚಾರ ಪಾಲೂ ಸಾಕಷ್ಟಿದೆ.

ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ.