ಸ್ಯಾಂಡಲ್‌ವುಡ್‌‌ ಪ್ರಚಂಡ ಕುಳ್ಳ ದ್ವಾರಕೀಶ್‌ ಕೊನೆಯುಸಿರೆಳೆದಿದ್ದಾರೆ.

ಕನ್ನಡ ಚಿತ್ರರಂಗದ ಲೆಜೆಂಡ್ ನಟ  ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್‌ ಕನ್ನಡ ಚಿತ್ರರಂಗವನ್ನು ಬಿಟ್ಟು ಹೋಗಿದ್ದಾರೆ

ಹೃದಯಾಘಾತದಿಂದ ದ್ವಾರಕೀಶ್‌ ಅಸುನೀಗಿದ್ದಾರೆ ಅಂತ ಹೇಳಲಾಗ್ತಿದೆ.  

ಕನ್ನಡ ಹಾಗೂ ತಮಿಳು ಚಿತ್ರಗಳಿಗೆ ಬಂಡವಾಳ ಹೂಡಿದ್ದಾರೆ ಕರ್ನಾಟಕದ ಕುಳ್ಳ ದ್ವಾರಕೀಶ್‌.

ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ದ್ವಾರಕೀಶ್‌ನ ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ.

1963ರಲ್ಲಿ ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್‌ ಪಾದಾರ್ಪಣೆ ಮಾಡಿದರು.

81 ವರ್ಷ ವಯಸ್ಸಾಗಿದ್ದ ದ್ವಾರಕೀಶ್‌ ಅವರಿಗೆ  ಹೃದಯಾಘಾತವಾಗಿದೆ ಅಂತ ಹೇಳಲಾಗ್ತಿದೆ.

ಎಲೆಕ್ಟ್ರಾನಿಕ್‌‌ ಸಿಟಿಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗ್ತಿದೆ.

ಡಾ ರಾಜ್‌ಕುಮಾರ್‌, ಅಂಬರೀಶ್‌, ವಿಷ್ಣುವರ್ಧನ್‌ ರಂತಹ ಮೇರು ನಟರ ಜೊತೆ ದ್ವಾರಕೀಶ್‌ ನಟಿಸಿದ್ದಾರೆ.