ಬಾಲಿವುಡ್ ಡ್ರಾಮಾ ಕ್ವೀನ್​ ರಾಖಿ ಸಾವಂತ್​ ತಮ್ಮ ಕಿರಿಕ್​ಗಳಿಂದ ಹೆಚ್ಚು ಸುದ್ಧಿಯಾದವರು

ಅದರಲ್ಲೂ ಪತಿ ಆದಿಲ್ ಖಾನ್ ಜೊತೆಗಿನ ಕಿತ್ತಾಟ ದೊಡ್ಡಮಟ್ಟದಲ್ಲಿ ಸುದ್ದಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಟಾಪ್​​ಸುದ್ಧಿಯಾಗಿತ್ತು

 ಇದೀಗ ತಮ್ಮ ಬಯೋಪಿಕ್ ಬಗ್ಗೆ ಆಸೆಯನ್ನ ನಟಿ ವ್ಯಕ್ತಪಡಿಸಿದ್ದಾರೆ

ತನ್ನ ಜೀವನ ಚರಿತ್ರೆಯನ್ನ ಕಾಂತಾರ ನಟ ಕಮ್ ಡೈರೆಕ್ಟರ್ ರಿಷಬ್ ಶೆಟ್ಟಿ ನಿರ್ದೇಶನ ಮಾಡಬೇಕು ಎಂದು ಪಟ್ಟುಹಿಡಿದಿದ್ದಾರೆ

ರಾಖಿ ಸಾವಂತ್ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲು ತೆರೆಮರೆಯಲ್ಲಿ ಪ್ಲ್ಯಾನ್ ನಡೆಸುತ್ತಿದ್ದಾರೆ ರಾಖಿ ಸಾವಂತ್

ಅದಕ್ಕೆ ನಿರ್ಮಾಪಕರು ಕೂಡ ಮುಂದೆ ಬಂದಿದ್ದಾರೆ

ಬೆಳಗ್ಗಿನ ತಿಂಡಿಗೆ ಮನೆಯಲ್ಲೇ ಮಾಡಿ ಜೋಳದ ಪೂರಿ; ಇಲ್ಲಿದೆ ರೆಸಿಪಿ

ತಮ್ಮ ಪಾತ್ರವನ್ನು ವಿದ್ಯಾ ಬಾಲನ್ ಮಾಡಿದರೆ ಉತ್ತಮ ಎಂದು ರಾಖಿ ಸಾವಂತ್ ಹೇಳಿಕೆ ಕೊಟ್ಟಿದ್ದಾರೆ

ನಿಮ್ಮ ಪಾತ್ರವನ್ನು ನೀವೇ ಮಾಡಬಹುದಲ್ಲ ಎಂದು ನಿರ್ಮಾಪಕರು ರಾಖಿಗೆ ಹೇಳಿದ್ದಾರಂತೆ

ಆ ಬಗ್ಗೆ ನಾನು ಯೋಚಿಸಿಲ್ಲ ಎಂದು ರಾಖಿ ಸಾವಂತ್ ಹೇಳಿಕೆ ನೀಡಿದ್ದಾರೆ

ಯಾರು ನಿರ್ದೇಶನ ಮಾಡಬೇಕು ಎಂದು ಕೇಳಿದ್ದಕ್ಕೆ ರಿಷಬ್ ಶೆಟ್ಟಿಯ ಹೆಸರನ್ನು ರಾಖಿ ಸಾವಂತ್ ಸೂಚಿಸಿ ಬಿಟ್ಟಿದ್ದಾರೆ 

ರಿಷಬ್, ತನ್ನ ಬಯೋಪಿಕ್ ನಿರ್ದೇಶಿಸಿದರೆ ಚೆನ್ನಾಗಿರುತ್ತೆ ಎಂದು ಆಸೆಯನ್ನು ವ್ಯಕ್ತಪಡಿಸಿದ್ದಾರೆ

ಸದ್ಯ ರಿಷಬ್ ಶೆಟ್ಟಿ ‘ಕಾಂತಾರ 2’ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಕಾಂತಾರ ಸಕ್ಸಸ್ ನಂತರ ಪಾರ್ಟ್ 2 ಕೂಡ ಗೆಲುವು ಕಾಣಲೇಬೇಕು ಎಂದು ಪಣ ತೊಟ್ಟಿದ್ದಾರೆ

 ಭಾರತದಲ್ಲೂ ಇದೆ ಪಾಕಿಸ್ತಾನ ಟೀಂ ಕ್ರೇಜ್! 7 ವರ್ಷಗಳ ನಂತರ ಬಂದ ದಾಯಾದಿ ರಾಷ್ಟ್ರದ ಟೀಂಗೆ ಗ್ರ್ಯಾಂಡ್‌ ವೆಲ್‌ಕಮ್